ಅಂತಿಮ ಅಧಿ ಸೂಚನೆ ಹಿಂಪಡೆಯಲು ಅಸಾಧ್ಯ

ಅಂತಿಮ ಅಧಿ ಸೂಚನೆ ಹಿಂಪಡೆಯಲು ಅಸಾಧ್ಯ

ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ :ಸಿಎಂ ಸಿದ್ದರಾಮಯ್ಯ ಭರವಸೆ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿ ಕೆಐಎಡಿಬಿ ಭೂ ಸ್ವಾಧೀನಕ್ಕೆ ಅಂತಿಮ ಅಧಿ ಸೂಚನೆ ಆಗಿರುವ ಜಾಗವನ್ನು ಹಿಂಪಡೆಯಲು ಸಾಧ್ಯವಿಲ್ಲ ಆದರೂ, ನಮ್ಮ ಸರ್ಕಾರ ರೈತರ ಪರ ವಾಗಿದ್ದು ಈ ವಿಷಯದ ಕುರಿತು ಜನಪ್ರತಿ ನಿಧಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಒಂದು ಮುಖ್ಯಮಂತ್ರಿಯ ಸಿದ್ರಾಮಯ್ಯ ಭರವಸೆ ನೀಡಿದರು.
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ‌ ಉಪಸ್ಥಿತಿಯಲ್ಲಿ ಬೆಂಗಳೂರಿನ ಸಿಎಂ ಕೃಷ್ಣ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ರೊಂದಿಗೆ ನಡೆದ ಸಭೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕರೆ ಜಮೀನು ಭೂಸ್ವಾಧೀನಕ್ಕೆ ಅಧಿ ಸೂಚನೆ ಹೊರಡಿಸಲಾಗಿದ್ದು ಈಗಾಗಲೇ‌ 3 ಬಾರಿ‌ ಭೂ ಸ್ವಾರ್ಧಿನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಬೋಸ್ವಾಧೀನ ಪ್ರಕ್ರಿಯೆ ಕೈ ಬಿಡಬೇಕು ಎಂದು ರೈತರ ಮನವಿಗೆ ಸಿಎಂ ಪ್ರತಿಕ್ರಿಯಿಸಿ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಾಮನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಇದನ್ನೂ ಓದಿ: ನಾನು ಬ್ಯಾಂಕ್ ಅಥವಾ ಹಣಕಾಸು

ಭೂ ಸ್ವಾರ್ಧಿನಿ ಕೈ ಬಿಡುವವರೆಗೂ ಹೋರಾಟ: ಕರ್ನಾಟಕ ದಲಿತ ಸಂಘರ್ಷ ಸಮಿತ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಮೊದಲ ಹಂತದಲ್ಲಿ ಸಾವಿರಕ್ಕೂ ಹೆಚ್ಚು ಎಕರೆ ಭೂ ಸ್ವಾರ್ಧಿನ ಪಡಿಸಿಕೊಂಡಿದ್ದಾರೆ . ಎರಡನೆಯ ಹಂತದಲ್ಲಿ 1777 ಎಕ್ಕರೆ ಭೂಸ್ವಾಧೀನ ಪ್ರಕ್ರಿಯೆ ಮಾಡುತ್ತಿದ್ದಾರೆ.
ಫಲವತ್ತಾದ ಭೂಮಿ ಆಗಿರುವುದರಿಂದ ತರಕಾರಿ, ಹಣ್ಣು, ಹೂ, ಕೃಷಿ ಮಾಡಿಕೊಂಡು ರೈತರು ಜೀವನ ಸಾಗಿಸುತ್ತಿದ್ದಾರೆ. ಕೈಗಾರಿಕೋದ್ಯಮಿಗಳು ಬೆಂಗಳೂರಿಗೆ ಹತ್ತಿರ ಇರುವುದರಿಂದ ಬೆಂಗಳೂರು ಸುತ್ತಮುತ್ತಲು ಜಾಗವನ್ನು ಕೇಳುತ್ತಾರೆ. ನಿತ್ಯ ಬೆಂಗಳೂರು ಮತ್ತು ಇತರ ಕಡೆಗಳಿಗೆ ಹಾಲು, ತರಕಾರಿ, ಹಣ್ಣು ಸೇರಿದಂತೆ‌ ವಿವಿಧ ಬೆಳೆಗಳನ್ನು ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಭೂಮಿಗಳನ್ನು ಭೂ ಸ್ವಾಧೀನ ಪ್ರಕ್ರಿಯೆ ಮಾಡಬಾರದು. ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸರ್ಕಾರ ಕೈಬಿಡುವ ತ್ತೇವೆ ಎಂದು ಘೋಷಿಸಿದ ನಂತರ ಹೋರಾಟವನ್ನು ರೈತರು ಹಿಂಪಡೆಯುತ್ತಾರೆ.ಡಿ. 30 ರಿಂದ ಚನ್ನರಾಯಪಟ್ಟಣ ನಾಡ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಹೋರಾಟವನ್ನು ಸ್ಥಳಾಂತರ ಮಾಡುತ್ತೇವೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈ ಬಿಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ. ಹೋರಾಟ ನಿರಂತರವಾಗಿ ಇರುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ ಕೆ.ಬಿ .ಪಾಟೀಲ್ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ .ನಾರಾಯಣಸ್ವಾಮಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ . ಆತೀಕ್ , ಜಿಲ್ಲಾಧಿಕಾರಿ ಬಾ.ಎನ್. ಶಿವಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿಗಳು, ರೈತ ಪ್ರತಿನಿಧಿಗಳು ಹಾಜರಿದ್ದರು.

Leave a Comment