ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಸೋಮವಾರ ನಾಮ ಪತ್ರವನ್ನು ಸಲ್ಲಿಸಿದರು.
ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಟಿಸಿ ಕಟ್ಟಡದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಅನೇಕ ಬಿಜೆಪಿ ಹಾಗು ಜೆಡಿಎಸ್ನ ಘಟಾನುಘಟಿ ನಾಯಕರು ಸಾಥ್ ನೀಡಿದರು.
ಇದನ್ನೂ ಓದಿ:-
ರಾಜ್ಯದಲ್ಲಿ ಡೆಂಘಿ ಜ್ವರ …….. ಎಚ್ಚರ ಎಚ್ಚರ!
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಎಮ್ಮೆಲ್ಸಿ ಇಂಚರಗೋವಿಂದರಾಜು,ಮಾಜಿ ಶಾಸಕ ವರ್ತೂರ್ ಪ್ರಕಾಶ್ ಇನ್ನಿತರೆ ಮುಖಂಡರೊಂದಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಅವರು ಶಿಡ್ಲಘಟ್ಟದಿಂದ ನೂರಾರು ಕಾರ್ಯಕರ್ತರ ಜತೆ ನಾಮಪತ್ರ ಸಲ್ಲಿಕೆಗೆ ತೆರಳಿದ್ದರು.
ವೈಎಎನ್ ನಾಮಪತ್ರ ಸಲ್ಲಿಸಿದ ನಂತರ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಜೂನ್ ೩ರಂದು ವಿಧಾನಪರಿಷತ್ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ ಸ್ಪರ್ಧಿಸಿದ್ದು ಇವರ ಗೆಲುವು ನಿಶ್ಚಿತ ಎಂದು ಹೇಳಿದರು.
ವೈಎಎನ್ ಅವರು ಶಿಕ್ಷಕರು,ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದ ತಜ್ಞರ ಜತೆ ನಿಖಟ ಸಂಪರ್ಕವಿಟ್ಟುಕೊಂಡಿದ್ದು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಹಳಷ್ಟು ಅರಿತಿದ್ದಾರೆ ಮತ್ತು ಅವುಗಳ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅವರಿಗೆ ಅರಿವಿದೆ ಎಂದರು.
ಹಾಗಾಗಿ ಈ ಭಾರಿ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಎಲ್ಲ ಶಿಕ್ಷಕರ ಆಶೀರ್ವಾದ ಸಿಗಲಿದೆ, ಮತ್ತೊಮ್ಮೆ ಬಹುಮತದಿಂದ ಗೆದ್ದು ವಿಧಾನಪರಿಷತ್ ಪ್ರವೇಶಿಸುವುದು ಶತ ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.