ಜಿಲ್ಲೆಯಲ್ಲೆಡೆ ಸಂಭ್ರಮ ಸಡಗರ ಕ್ರಿಸ್ ಮಸ್
ಜಿಲ್ಲಾಧ್ಯಂತ ಚರ್ಚ್ ಗಳಲ್ಲಿ ಪ್ರಾರ್ಥನೆ ! ಶುಭಾಶಯ ವಿನಿಮಯ ಚರ್ಚ್ ಗಳ ಆವರಣದ ಗೋಡೆಗಳಲ್ಲಿ ಬಾಲ ಏಸುವಿನ ಪ್ರತಿಷ್ಠಾಪನೆ
ರಾಮನಗರ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಬುಧವಾರ ಸಂಭ್ರಮ ಸಡಗರದಿಂದ ಕ್ರಿಸ್ ಮಸ್ ಹಬ್ಬವನ್ನು ಆಚರಿಸಿದರು .ರಾಮನಗರ ,ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಲ್ಲಿನ ಚರ್ಚ್ ಗಳಲ್ಲಿ ಬೆಳಗ್ಗೆ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ದೇವರ ಧಾನ್ಯ ಮಾಡಿದರು. ರಾಮನಗರ ರೈಲ್ವೆ ನಿಲ್ದಾಣದ ಬಳಿ ಇರುವ ಲೂದ್ಮು ಮಾತಾ ಚರ್ಚ್, ಬಿಡದಿ ಬಳಿಯ ಸುವಿಶೇಷ ಆಶ್ರಮದ ಸಮಸ್ತ ದೇಶಗಳ ಪ್ರಾರ್ಥನಾ ಮಂದಿರದಲ್ಲಿ ಕ್ರಿಸ್ ಮಸ್ ಆಚರಣೆ ಮಾಡಲಾಯಿತು. ಮಂಗಳವಾರ ಮಧ್ಯ ರಾತ್ರಿಯಿಂದಲೇ ವಿಶೇಷ ಪ್ರಾರ್ಥನೆಗಳನ್ನು ಮಾಡುವ ಮೂಲಕ ಏಸು ಕ್ರಿಸ್ತ ಹುಟ್ಟಿದ ದಿನವನ್ನು ಅದ್ದೂರಿಯಿಂದ ಆಚರಿಸಿದರು.
ಇದನ್ನೂ ಓದಿ:- ಬರಲಿದೆ ಬೈಜಿಕ ಗಡಿಯಾರ
ಮಂಗಳವಾರ ರಾತ್ರಿ 12 ಗಂಟೆಯಲ್ಲಿ ಬಾಲ ಏಸುವಿನ ಮೂರ್ತಿಯನ್ನು ಮೆರವಣಿಗೆಯಲ್ಲಿ ಕರೆತಂದು ಭತ್ತದ ಹುಲ್ಲು, ಲಾಳದ ಕಡ್ಡಿ, ಮರಳು ಮತ್ತಿತರ ವಸ್ತುಗಳನ್ನು ಬಳಸಿ ಕ್ರಿಸ್ತನಿಗಾಗಿ ಮೊದಲೇ ನಿರ್ಮಿಸಿದ್ದ ತೊಟ್ಟಿಲಲ್ಲಿ (ಗೊಂದಲಿ) ಪ್ರತಿಷ್ಠಾಪಿಸಿ, ಪ್ರಾರ್ಥನೆ, ಪೂಜೆ ಸಲ್ಲಿಸಿ ಬಾಲ ಯೇಸುವನ್ನು ಬರಮಾಡಿಕೊಳ್ಳಲಾಗಿತು. ತಮ್ಮ ಜೀವನದಲ್ಲಿ ಬೆಳಕಾಗಿ ಬಂದ ಕ್ರಿಸ್ತನನ್ನು ಸಮುದಾಯ ಸದಸ್ಯರು ಚರ್ಚನಲ್ಲಿ ಮೊಂಬತ್ತಿ ಬೆಳಗಿ ತಮ್ಮ ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು. ವಿಶೇಷ ಗೀತೆಗಳನ್ನು ಹಾಡುವ ಮೂಲಕ ಶ್ರದ್ಧಾ ಭಕ್ತಿಯನ್ನು ಮರೆದರು. ಚರ್ಚ್ ಆವರಣದಲ್ಲಿ ರಚಿಸಿದ್ದಾಗೊಂದಲಿ ಸಾರ್ವಜನಿಕರ ಗಮನ ಸೆಳೆಯಿತು.
ಕ್ರಿಸ್ತನ ಜನನ ವೃತ್ತಾಂತವನ್ನು ಬಿಂಬಿಸುವ ಗೊಂಬೆಗಳನ್ನು ಆಲಿಸಿದ್ದವು. ಬಣ್ಣ ಬಣ್ಣದ ನಕ್ಷತ್ರಗಳ ಮಿಂಚು, ಬಲೂನ್ ಗಳು ಚಿತ್ರರ ,ಹಚ್ಚ ಹಸುರಿನ ಕ್ರಿಸ್ ಮಸ್ ಟ್ರೀಗಳು, ವಿಭಿನ್ನ ವಿನ್ಯಾಸದ ಗೊಂದಲ, ಸಂತಾ ಕ್ಲಾಸ್ ಪ್ರತಿಬಿಂಬ, ಶುಭ ಸಂಕೇತದ ಗಂಟೆಗಳ ಮೂಲಕ ವಿಶೇಷ ಪ್ರಾರ್ಥನಾ ಮಂದಿರ ಸಾರ್ವಜನಿಕರ ಆಕರ್ಷಣೆಗೆ ಕಾರಣವಾಗಿತ್ತು. ಕ್ರಿಸ್ ಮಸ್ ಹಬ್ಬ ಕ್ರೈಸ್ತ ಸಮುದಾಯದವರಿಗೆ ಮಾತ್ರ ಸೀಮಿತವಾಗಿರಲಿಲ್ಲ. ಹಿಂದುಗಳೂ ಸಹ ಚರ್ಚ್ ಗಳಿಗೆ ಭೇಟಿ ನೀಡಿ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವ ಮೂಲಕ ಧಾರ್ಮಿಕ ಭಾವೈಕ್ಯತೆ ಮರೆದರು. ಅಲ್ಲದೆ ಸಮುದಾಯದವರಿಗೆ ಹಬ್ಬದ ಶುಭಾಶಯಗಳು ತಿಳಿಸಿ ಅವರೊಟ್ಟಿಗೆ ಮನೆಗಳಿಗೆ ಭೇಟಿ ನೀಡಿ ಸಿಹಿ ಪದಾರ್ಥ, ತಾಜಾ ಕೇಕುಗಳನ್ನು, ಘಮ ಘಮಿಸುವ ಬಿರಿಯಾನಿ ಸೇರಿದಂತೆ ಭಕ್ಷ ಭೋಜನವನ್ನು ಸವಿದರು. ಕನಕಪುರ : ನಗರದ ಸಂತ ಮೇರಿ ಚರ್ಚ್ ನಲ್ಲಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಕ್ರೈಸ್ತ ಬಂಧವರು ಶ್ರದ್ಧಾ ಭಕ್ತಿಗಳಿಂದ ಪ್ರಾರ್ಥನೆ ಸಲ್ಲಿಸಿದರು. ರಾತ್ರಿಯಿಂದಲೇ ಕ್ರೈಸ್ತ ಬಾಂಧವರು ಚರ್ಚ್ಗೆಗೆ ಭೇಟಿ ನೀಡಿ ಯೇಸು ಕ್ರಿಸ್ತನ ಭಕ್ತಿ ಗೀತೆಗಳನ್ನು ಹಾಡಿ ಇಡೀ ಜಗತ್ತಿಗೆ ಒಳಿತನು ಮಾಡುವಂತೆ ಪ್ರಾರ್ಥಿಸಿದರು.