ಪ್ರಿಯಾಂಕ ಗಾಂಧಿ ಆರೋಗ್ಯದಲ್ಲಿ ಏರುಪೇರು:-
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಶುಕ್ರವಾರ ಉತ್ತರ ಪ್ರದೇಶಕ್ಕೆ ಪ್ರವೇಶಿಸಲಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸಬೇಕಾಗಿತ್ತು, ಆದರೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಭಾರತ್ ಜೋಡೋ ಯಾತ್ರೆಯಿಂದ ದೂರ ಉಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವತಃ ಪ್ರಿಯಾಂಕಾ ಗಾಂಧಿ ಅವರು ತಾವೂ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ಬಹಿರಂಗಪಡಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶುಕ್ರವಾರ ಉತ್ತರ ಪ್ರದೇಶಕ್ಕೆ ಆಗಮಿಸಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರಿಗೆ ಆರೋಗ್ಯದಲ್ಲಿ ಏನಾಗಿದೆ ಎಂಬುದನ್ನು ಪ್ರಿಯಾಂಕಾ ಗಾಂಧಿ ಅಥವಾ ಕಾಂಗ್ರೆಸ್ ಮೂಲಗಳು ಬಹಿರಂಗಪಡಿಸಿಲ್ಲ.
ಉತ್ತರ ಪ್ರದೇಶಕ್ಕೆ ಭಾರತ್ ಜೋಡೋ ಯಾತ್ರೆ:-
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಶುಕ್ರವಾರ ಉತ್ತರ ಪ್ರದೇಶಕ್ಕೆ ಪ್ರವೇಶ ಮಾಡುತ್ತಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸಬೇಕಾಗಿತ್ತು, ಆದರೆ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : HSRP ನಂಬರ್ ಪ್ಲೇಟ್ ಕೊನೆ ದಿನಾಂಕ ವಿಸ್ತರಣೆ: ರಾಮಲಿಂಗರೆಡ್ಡಿ ಘೋಷಣೆ
ಪ್ರಿಯಾಂಕ ಗಾಂಧಿ ಡಿಸ್ಚಾರ್ಜ್ ಆದ ಬಳಿಕ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ:-
“ಸಹೋದರ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಉತ್ತರ ಪ್ರದೇಶ ರಾಜ್ಯಕ್ಕೆ ಪ್ರವೇಶಿಸಿದೆ. ನಾನು ಯಾತ್ರೆಯನ್ನು ಸ್ವಾಗತಿಸಲು ಮತ್ತು ಅದರಲ್ಲಿ ಭಾಗವಹಿಸಲು ತುಂಬಾ ಉತ್ಸುಕರಾಗಳಿದ್ದೆ. ಆದರೆ ದುರದೃಷ್ಟವಶಾತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಅನಾರೋಗ್ಯ ಕಡಿಮೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ”. ಆದರೆ ರಾಹುಲ್ ಗಾಂಧಿ ಅವರ ಪ್ರವಾಸಕ್ಕೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ನನ್ನ ಪ್ರೀತಿಯ ಸಹೋದರ ಹಾಗೂ ಉತ್ತರ ಪ್ರದೇಶದ ನನ್ನ ಸಹದ್ಯೋಗಿಗಳಿಗೆ ರಾಜ್ಯದ ಜನರ ಆಶೀರ್ವಾದ ಸಿಗಲಿ ಎಂದು ಪ್ರಿಯಾಂಕಾ ಗಾಂಧಿ ಹಾರೈಸಿದ್ದಾರೆ.
ಮಣಿಪುರದಿಂದ ಮುಂಬೈಗೆ ಸಾಗುತ್ತಿರುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಶುಕ್ರವಾರ ಫೆಬ್ರವರಿ 16 ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿ ಪ್ರವೇಶ ಮಾಡಿದೆ. ರಾಹುಲ್ ಗಾಂಧಿ ಯಾತ್ರ ವಾರಣಾಸಿಯಿಂದ ಪ್ರಯಾಗರಾಜ್ ಮತ್ತು ಪ್ರತಾಪಗಢ ಮೂಲಕ ಇದೇ 19ಕ್ಕೆ ತಮ್ಮ ಸ್ವಕ್ಷೇತ್ರ ಅಮೇಥಿ ತಲುಪಲಿದೆ. ಈ ಹಿನ್ನಲೆಯಲ್ಲಿ ಅಮೇತಿಯಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಬಳಿಕ ಇದೇ ತಿಂಗಳ 20ರಂದು ರಾಹುಲ್ ಗಾಂಧಿ ಯಾತ್ರೆ ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್ ಬರೇಲಿ ತಲುಪಲಿದೆ.
ಸೋನಿಯಾ ಗಾಂಧಿ ಬದಲು ರಾಯ್ ಬರೇಲಿಯಿಂದ ಪ್ರಿಯಾಂಕ ಸ್ಪರ್ಧೆ:-
ಪ್ರಸ್ತುತ ರಾಯ್ ಬರೇಲಿ ಸಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಇತ್ತೀಚೆಗೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ರಮದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ. ಈ ಕಾರಣಕ್ಕೆ ಸೋನಿಯಾ ಗಾಂಧಿ ಬದಲಿಗೆ ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲು ಮುಂದಾಗಿದ್ದಾರೆ ಎಂದು ವರದಿ ತಿಳಿದಿದೆ.
So sad…. Come fast Priyanka gandhi