ಮುಡಾ ಹಗರಣ: ಇ.ಡಿ ಕಾತುಕ ಬಾಕಿ
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ. ಸಮನ್ಸ್ ರದ್ದು ಕೋರಿ ಪಾರ್ವತಿ ಮತ್ತು ಬೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಧಾರವಾಡದಲ್ಲಿ ಗುರುವಾರ ವಿಚಾರಣೆ ನಡೆಸಿತು. ವಾದ ಪ್ರತಿವಾದ ಆಲಿಕೆ ಪೂರ್ಣಗೊಳಿಸಿದ ನ್ಯಾಯಾಲಯ, ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ಮುಂದುವರಿಸಿತು.
ಇ.ಡಿ ತನಿಖೆಗೆ ವ್ಯಾಪ್ತಿ ಇಲ್ಲ: ಸಿಎಂ ಪತ್ನಿ ಪಾರ್ವತಿ ಪರವಾದ ಮಾಡಿದ ಹಿರಿಯ ವಕೀಲ ಸಂದೇಶ್ ಚೌಟ, ಮುಡಾದ14ನಿವೇಶನಗಳನ್ನು ಅಕ್ಟೋಬರ್ ಒಂದರಂದೆ ಪಾರ್ವತಿ ಹಿಂತಿರುಗಿಸಿದ್ದಾರೆ ಅವರು ನಿವೇಶನಗಳನ್ನು ಅನುಭವಿಸುತ್ತಿಲ್ಲ. ಹೀಗಾಗಿ, ಅಪರಾಧದ ಸಂಪತ್ತು ಅವರ ಬಳಿ ಇಲ್ಲ. ಆದ್ದರಿಂದ ಇಡಿಗೆ ತನಿಖೆ ವ್ಯಾಪ್ತಿ ಇಲ್ಲ. ಅಪರಾಧದಿಂದ ಗಳಿಸಿದ ಸಂಪತ್ತಿದ್ದರೆ ಮಾತ್ರ ಇಡಿ ತನಿಖೆ ನಡೆಸಬಹುದು.
ಆದರೆ, ನಿವೇಶನಗಳನ್ನು ಮರಳಿಸಿದ ನಂತರ ಇಡಿ ತನಿಖೆ ಆರಂಭಿಸಿದೆ. ಅಪರಾಧದಿಂದ ಗಳಿಸಿದ ಹಣ ಚಟುವಟಿಕೆಗೆ ಬಳಕೆಯಾಗಬೇಕು. ಇಲ್ಲವಾದರೆ ಪಿಎಂಎಲ್ಎ ಕಾಯಿದೆ ಅನ್ವಯವಾಗುವುದಿಲ್ಲ ಎಂದರು.”ಇಡಿ ಇಸಿಐಆರ್ ದಾಖಲಿಸಿದ್ದೇ ಸರಿಯಲ್ಲ. ಲೋಕಾಯುಕ್ತರು ಎಫ್ಐಆರ್ ದಾಖಲಿಸಿದ 4 ದಿನಗಳಲ್ಲೇ ಇಡಿ ಇಸಿಐಆರ್ ದಾಖಲಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯನ್ನೇ ಇ.ಡಿ ಪುನರಾವರ್ತಿಸುತ್ತಿದೆ. ಇ.ಡಿಸಲ್ಲಿಸಿರುವ ಆಕ್ಷೇಪಣೆಯಲ್ಲಿ 14 ನಿವೇಶನ ಅಪರಾಧದ ಸಂಪತ್ತೆಂದಿದೆ. ಮುಡಾದ 1708 ನಿವೇಶನಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಈಗಾಗಲೇ 160 ನಿವೇಶನಗಳನ್ನು ಇಡಿ ತಾತ್ಕಾಲಿಕ ಜಪ್ತಿ ಮಾಡಿದೆ. ಇಡಿ: ಆ ತನ್ನ ಕಾರ್ಯವ್ಯಾಪ್ತಿ ಮೀರಿ ಪರ್ಯಾಯ ತನಿಖೆ ನಡೆಸುತ್ತಿದೆ,” ಎಂದು ಹೇಳಿದರು.
“ಇ.ಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಹಲವು ಅಂಶ ಪ್ರಸ್ತಾಪಿಸಿದೆ. ಜತೆಗೆ ಭೂಸ್ವಾಧೀನ, ಭೂಪರಿವರ್ತನೆ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಯಲ್ಲಿ ಇಡಿ ಪ್ರವೇಶಿಸಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡು ಬಂದಿಲ್ಲವೆಂದು ವರದಿ ಸಲ್ಲಿಸಿದ್ದಾರೆ. ಹಾಗಾಗಿ, ಅರ್ಜಿ ಮಾನ್ಯ ಮಾಡಬೇಕು,” ಎಂದು ನ್ಯಾಯಾಲಯವನ್ನು ಕೋರಿದರು. ಅಪರಾಧದ ಸಂಪತ್ತು ತನಿಖೆ ಇಡಿ ಪರ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, “ಭ್ರಷ್ಟಾಚಾರ ಹಾಗೂ ಅಪರಾಧದ ಹಣ ಸಯಾಮಿ ಅವಳಿಗಳಂತೆ, ಭ್ರಷ್ಟಾಚಾರ ಆಗುತ್ತಿದ್ದಂತೆ ಅಪರಾಧದ ಹಣ ಸಂಪಾದನೆಯಾಗುತ್ತದೆ. ಖಾಸಗಿ ದೂರಿನಲ್ಲಿ ಐದು ಸಾವಿರ ಕೋಟಿ ಮುಡಾ ಹಗರಣವನ್ನೂ ಪ್ರಸ್ತಾಪಿಸಲಾಗಿದೆ. ಆ ಖಾಸಗಿ ದೂರು ಆಧರಿಸಿಯೇ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಾಗಾಗಿ, ಇದು ಕೇವಲ 14 ನಿವೇಶನಗಳಿಗೆ ಸಂಬಂಧಿಸಿದ ದೂರು ಮಾತ್ರವಲ್ಲ, ಮುಡಾದ ಅಕ್ರಮಗಳ ದೂರಾಗಿದ್ದು, ಆ ಬಗ್ಗೆ ಇಡಿ ತನಿಖೆ ನಡೆಸಿದೆ” ಎಂದರು.
“ಇಡಿ ಪ್ರಶ್ನಾವಳಿಯಲ್ಲಿ ಸಂಬಂಧಿಗಳ ವಿವರ ಕೇಳಿದ್ದಕ್ಕೆ ಬಿ ಆಕ್ಷೇಪಿಸಿದ್ದಾರೆ. ಮುಡಾದ ಅಪರಾಧದ ಸಂಪತ್ತನ್ನು ಸಂಬಂಧಿಗಳಿಗೆ ಹಸ್ತಾಂತರಿಸಲಾಗಿದೆ. ಪ್ರಭಾವಿ ವ್ಯಕ್ತಿಗಳು ಒತ್ತಡ ಹೇರಿ ನೆಂಟರ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಹೇಳಿದರು. ಮಾಡಿಸಿಕೊಂಡಿದ್ದಾರೆ. ಮುಡಾ ಮಾಜಿ ಆಯುಕ್ತರು ತಮ್ಮ ತಾತ, ಹೆಂಡತಿಯ ತಾತ, ಸಹೋದರನ ಮಗ, ಹೆಂಡತಿಯ ತಾತ ಹಲವರಿಗೆ ನಿವೇಶನ ಹಂಚಿ ಅಕ್ರಮ ಎಸಗಿದ್ದಾರೆ. ಹಾಗಾಗಿಯೇ ಸಂಬಂಧಿಗಳ ವಿವರವನ್ನೂ ಆರೋಪಿಗಳಿಂದ ಕೇಳುತ್ತಿದ್ದೇವೆ,” ಎಂದು ವಿವರಿಸಿದರು.”ಸಿಎಂ ಪಾರ್ವತಿ 2024ರ ಅಕ್ಟೋಬರ್ 1ರಂದೇ 14 ನಿವೇಶನಗಳನ್ನು ಮುಡಾಗೆ ಹಿಂತಿರುಗಿಸಿದ್ದಾರೆ. ಮುಡಾ ಜೆಟ್ ವಿಮಾನದ ವೇಗದಲ್ಲಿ ಆ ಸೈಟ್ಗಳನ್ನು ವಾಪಸ್ ಪಡೆದಿದೆ. ಸಾಮಾನ್ಯ ಜನ ಹೋದರೆ ತಿಂಗಳಾದರೂ ಕೆಲಸ ಆಗುವುದಿಲ್ಲ. ಸಿಎಂ ಪತ್ನಿ ಮನವಿ ಕೊಟ್ಟರೆ ಆ ಕ್ಷಣವೇ ಕೆಲಸವಾಗುತ್ತದೆ. ಇಸಿಐಆರ್ ದಾಖಲಿಸಿದಾಗ 14 ನಿವೇಶನ ಸಿಎಂ ಪತ್ನಿ ವಶದಲ್ಲಿತ್ತು.ಅದುಅಪರಾಧದ ಸಂಪತ್ತಾಗಿರುವುದರಿಂದ ತನಿಖೆ ಅಗತ್ಯ. ಇ.ಡಿ ಸಮನ್ಸ್ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ, ಮಾಹಿತಿಗಾಗಿ ಜಾರಿಗೊಳಿಸಿದೆ. ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿರಬಹುದು. ಆದರೆ, ಕೋರ್ಟ್ ಇನ್ನೂ ಬಿ ರಿಪೋರ್ಟ್ ಅಂಗೀಕರಿಸಿಲ್ಲ, ಬಿ ರಿಪೋರ್ಟ್ ಪ್ರಶ್ನಿಸಲು ಇಡಿಗೂ ಅಧಿಕಾರವಿದೆ,” ಎಂದು ಹೇಳಿದರು.