ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳು ಮಾಡಬೇಕು
ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನೂ ನಾವು ಮಾಡಬೇಕಿದೆ ಮುಖ್ಯವಾಗಿ ಮಕ್ಕಳ ದಾಖಲಾತಿ ಹೆಚ್ಚುವಂತ ಚಟುವಟಿಕೆಗಳು, ಪೂರಕ ವಾತಾವರಣ ನಿರ್ಮಾಣ ಮಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳಲು ಸಿದ್ದರಾಗಿ ಎಂದು ಶಿಡ್ಲಘಟ್ಟ ನಗರದ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬೈಲಾಂಜನಪ್ಪ ತಿಳಿಸಿದರು.
ನಗರದ ಹೊರವಲಯದಲ್ಲಿ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತಾಲ್ಲೂಕಿನ ಎಲ್ಲಾ ಮುಖ್ಯ ಶಿಕ್ಷಕರ ತರಬೇತಿ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರವು ಸರ್ಕಾರಿ ಶಾಲೆಗಳಿಗೆ ನುರಿತ ಶಿಕ್ಷಕರ ನೇಮಕ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ನೀಡುತ್ತಿದ್ದರೂ ಶಾಲೆಗಳಿಗೆ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವ ಬಗ್ಗೆ ಶಿಕ್ಷಕರು ಹಾಗೂ ನಾವು ಅಧಿಕಾರಿಗಳು ಚಿಂತನೆ ಮಾಡಿಕೊಳ್ಳಬೇಕೆಂದರು.
ಇದನ್ನೂ ಓದಿ: ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು!
ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು
ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಮತ್ತು ಅದಕ್ಕೆ ಪೂರಕವಾಗಿ ಪ್ರಾಥಮಿಕ ಶಾಲಾ ಹಂತದಲ್ಲೆ ಮಕ್ಕಳನ್ನು ಶೈಕ್ಷಣಿಕವಾಗಿ ಹೆಚ್ಚು ತರಬೇತಿಗೊಳಿಸಬೇಕು ಕಲಿಯುವ ಪ್ರಕ್ರಿಯೆ ಹೆಚ್ಚಿಸಬೇಕು ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಕೋರಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಅದಕ್ಕೆ ಪೂರಕವಾದ ವಾತಾವರಣ ನಿರ್ಮಾಣ, ಚಟುವಟಿಕೆಗಳನ್ನು ನಡೆಸಬೇಕು ಎಂದರು.
ಮೊದಲು ಸರ್ಕಾರಿ ಶಾಲೆಯಲ್ಲಿನ ಸವಲತ್ತು, ಶಿಕ್ಷಣದ ಗುಣಮಟ್ಟ, ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮನನ ಮಾಡಿಕೊಡುವ ಕೆಲಸವಾಗಬೇಕು ಪೋಷಕರಿಗೆ ಈ ಬಗ್ಗೆ ಮನವರಿಕೆಯಾಗಿ ನಂಬಿಕೆ ಬಂದಾಗಲೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಸೇರಿಸುತ್ತಾರೆಯೆ ಹೊರತು ಕೇವಲ ನಮ್ಮ ಮಾತುಗಳಿಗೆ ಭರವಸೆಗಳಿಗೆ ಸೇರಿಸುವುದಿಲ್ಲ ಎಂದರು.
ಇದೆಲ್ಲದರ ಜತೆಗೆ ಶಿಕ್ಷಕರು ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದ ಬಗ್ಗೆ ವಿಶ್ಲೇಷಣೆ ಮಾಡಬೇಕಿದೆ ಮತ್ತು ಮುಂದಿನ ವರ್ಷ ಫಲಿತಾಂಶ ಹೆಚ್ಚಲು,ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚು ಆಸಕ್ತರಾಗಬೇಕು ಮತ್ತು ಕ್ರೀಯಾಶೀಲರಾಗಬೇಕೆಂದು ಹೇಳಿದರು.
ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು ಕಾರ್ಯಕ್ರಮದ ಉಪಸ್ಥಿತರು
ಇದೇ ವೇಳೆ ಶೈಕ್ಷಣಿಕ ಕ್ರಿಯಾ ಯೋಜನೆ ಪಟ್ಟಿ ತಯಾರಿಕೆ, ಸಮಯ ಪಾಲನೆ, ಮಕ್ಕಳ ಪೋಷಕರೊಂದಿಗೆ ಸಮನ್ವಯತೆ,ಇಲಾಖೆಯ ನೀತಿ ನಿಯಮಗಳ ಪಾಲನೆ,ತರಬೇತಿಗಳು ಇನ್ನಿತರೆ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಶಾಲಾ ಆರಂಭಕ್ಕೂ ಮುನ್ನಾ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಬಿಇಒ ನರೇಂದ್ರಕುಮಾರ್,ಅಕ್ಚರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಸಮನ್ವಯ ಅಧಿಕಾರಿ ತ್ಯಾಗರಾಜ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಬಿಆರ್ಪಿ,ಸಿಆರ್ಪಿಗಳು ಹಾಗು ಮುಖ್ಯ ಶಿಕ್ಷಕರು ಹಾಜರಿದ್ದರು.