ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು!

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು!

ಶಿಡ್ಲಘಟ್ಟ ನಗರದ ಅಗ್ರಹಾರ ಬೀದಿಯಲಿರುವ ಶಾಮಣ್ಣ ಬಾವಿಯ ಬಳಿಯಿರುವ ದೇವಾಲಯದಲ್ಲಿ  ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.

ಅಗ್ರಹಾರ ಬೀದಿಯಲ್ಲಿದ್ದ ಶಾಮಣ್ಣ ಎಂಬುವವರು ಸುಮಾರು 400 ವರ್ಷಕ್ಕೂ ಹಿಂದೆ ಇಲ್ಲಿನ ದೇವಾಲಯದ ಬಳಿ ಕಲ್ಯಾಣಿ ನಿರ್ಮಿಸಿದ್ದರು, ಅದ್ದರಿಂದಲೇ ಜನರ ಬಾಯಿಯಲ್ಲಿ ಇದು ಶಾಮಣ್ಣಬಾವಿಯೆಂದೇ ಪ್ರಚಲಿತವಾಗಿದೆ ಇಲ್ಲಿ ಸದಾ ಶುದ್ಧವಾದ ನೀರಿರುತ್ತಿತ್ತು  ಒಂದೆಡೆ ವಿಶಾಲ ಅರಳಿಕಟ್ಟೆಯಿದ್ದರೆ ಮತ್ತೊಂದೆಡೆ ದೇವಾಲಯವಿದೆ,ವಿಷ್ಣು ಮತ್ತು ಶಿವ ಒಂದೆಡೆ ಎಲ್ಲೂ ಕಾಣಸಿಗದು ಆದರೆ ಇಲ್ಲಿ ಶ್ರೀಕಂಠೇಶ್ವರ ಮತ್ತು ಶ್ರೀಲಕ್ಷ್ಮೀನರಸಿಂಹಸ್ವಾಮಿ ಒಂದೆಡೆಯಿದ್ದಾರೆ. 

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿ

ಇದರೊಂದಿಗೆ ಪಾರ್ವತಿ,ಗಣೇಶ,ಶ್ರೀಸುಬ್ರಮಣ್ಯ, ಶ್ರೀಆಂಜನೇಯ, ಶ್ರೀಕೇದಾರೇಶ್ವರ ಮುಂತಾದ ದೇವರುಗಳಿವೆ, ಇದನ್ನು ಶೈವ,ವೈಷ್ಣವ ದೈವ ಸಂಗಮ ಕ್ಷೇತ್ರವೆನ್ನಬಹುದು ಶಾಮಣ್ಣ ಬಾವಿಯ ಸುತ್ತ ಅರಳಿ ಮರಗಳು,ಹುಣಸೆ, ತೆಂಗು, ಹೊಂಗೆ ಮುಂತಾದ ಮರಗಳಿದ್ದು ಅತ್ಯಂತ ಪ್ರಶಾಂತವಾದ ಸುಂದರವಾದ ತಾಣವಾಗಿದೆ.

ಇದನ್ನೂ ಓದಿ:ಜೂನ್ 14 ರ ನಂತರ ಆಧಾರ್ ಕಾರ್ಡ್ ರದ್ದು!

ಹಿಂದೂ ಪಂಚಾಂಗದ ಪ್ರಕಾರ ಪ್ರತಿ ವರ್ಷ ವೈಶಾಖ ಮಾಸದ ಶುಕ್ಲಪಕ್ಷದ ಚತುರ್ದಶಿಯ ದಿನದಂದು ನರಸಿಂಹ ಜಯಂತಿಯನ್ನು ಆಚರಿಸಲಾಗುತ್ತದೆ ಈ ದಿನ ಶ್ರೀವಿಷ್ಣುವು ತನ್ನ ಭಕ್ತ ಪ್ರಹ್ಲಾದನನ್ನು ತಂದೆ ಹಿರಣ್ಯಕಶ್ಯಪುವಿನಿಂದ ರಕ್ಷಿಸಲು ನರಸಿಂಹಸ್ವಾಮಿಯ ಅವತಾರದಲ್ಲಿ ಬಂದ ದಿನ ಎಂದು ನಂಬಲಾಗಿದೆ. ಆದ್ದರಿಂದ ಪ್ರತಿ ವರ್ಷ ಈ ದಿನವನ್ನು ಶ್ರೀನರಸಿಂಹಸ್ವಾಮಿ ಜಯಂತಿಯನ್ನಾಗಿ ಆಚರಿಸುತ್ತಾ ಬರಲಾಗಿದೆ ಎಂದು ಅರ್ಚಕ ನಾಗರಾಜಶಾಸ್ತ್ರಿ ಇತಿಹಾಸ ಪ್ರಸಿದ್ಧ ದೇವಾಲಯದ ಬಗ್ಗೆ ಮಾಹಿತಿ ಸಹಿತ ವಿವರಿಸಿದರು.

Leave a Comment